ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಭಾಗವಾಗಿ ರಾಜ್ಯದ 15 ನದಿ, ಉಪನದಿಗಳಿಂದ ನೀರನ್ನು ಸಂಗ್ರಹಿಸಿರುವ ‘ಗಂಗಾಜಲ ಕಳಶ’ದ ಪ್ರತಿಷ್ಠಾಪನೆ ಸಮಾರಂಭ ಗುರುವಾರ ಜೆಡಿಎಸ್ ಕಚೇರಿಯಲ್ಲಿ ನಡೆಯಲಿದೆ.
ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು.
ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ500 ಲೀಟರ್ ಜಲ ತುಂಬಲಿರುವ10 ಅಡಿಯ ಎತ್ತರದ ಕಳಶವನ್ನು ಸ್ಥಾಪನೆ ಮಾಡಲಾಗುವುದು. ದೇಶದ ಏಳು ಮಹಾ ನದಿಗಳ ಹೆಸರಿನಲ್ಲಿ ಪುಟ್ಟ ಕಳಸಗಳನ್ನು ಇಟ್ಟು ಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.
ಕಳಸ ಪ್ರತಿಷ್ಠಾಪನೆ ಮಾಡಲಿರುವ ಮಂಟಪವನ್ನು ಕರ್ನಾಟಕದ ಪರಂಪರೆಬಿಂಬಿಸುವ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದರು. ಬೆಳಿಗ್ಗೆ 9 ಗಂಟೆಯಿಂದ ನಡೆಯಲಿರುವ ಗಂಗಾ ಪೂಜೆ ಸಂದರ್ಭದಲ್ಲಿ ಪರ್ಜನ್ಯ ಹೋಮ, ಗಣ ಹೋಮ, ನವಗ್ರಹ ಹೋಮ ಸೇರಿದಂತೆ ಹಲವು ಹೋಮಗಳು ನಡೆಯಲಿವೆ. ಮುಂದಿನ ಚುನಾವಣೆವರೆಗೆ ಈ ಕಳಶಕ್ಕೆ ಪೂಜೆ ನಡೆಯುತ್ತದೆ.ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಹಲವಾರು ಪ್ರಮುಖರು ಪೂಜಾ ಕಾರ್ಯಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.