ಬೆಂಗಳೂರು: ರಾಜ್ಯಸಭೆ ಸದಸ್ಯರೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇವೇಗೌಡರು ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಕಳೆದ ವಾರ ದೆಹಲಿಗೆ ತೆರಳಿದ್ದರು. ಅಲ್ಲಿ ಚಳಿ ಜಾಸ್ತಿ ಇದ್ದ ಕಾರಣದಿಂದ ಜ್ವರ ಮತ್ತು ಶೀತದ ಸಮಸ್ಯೆ ಕಾಣಿಸಿಕೊಂಡಿತ್ತು. ಗುರುವಾರ ಬೆಳಿಗ್ಗೆ ನಗರದ ಆಸ್ಪತ್ರೆಯೊಂದಕ್ಕೆ ಆರೋಗ್ಯ ತಪಾಸಣೆಗೆ ಹೋಗಿದ್ದರು. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಈ ಕುರಿತು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ದೇವೇಗೌಡರು, ‘ನನ್ನ ಆರೋಗ್ಯದ ಕುರಿತು ವೈಭವೀಕರಿಸಿದ ವರದಿಗಳು ಪ್ರಕಟವಾಗುತ್ತಿರುವುದು ಗಮನಕ್ಕೆ ಬಂದಿದೆ. ನಾನು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಯಲ್ಲಿದ್ದೇನೆ. ಶೀಘ್ರದಲ್ಲಿ ಮನೆಗೆ ಮರಳುತ್ತೇನೆ. ಆತಂಕಪಡಬೇಕಾದ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.