ADVERTISEMENT

7 ಕಡೆ ಕಳವು: ₹ 55 ಲಕ್ಷ ಮೌಲ್ಯದ ಆಭರಣ ಜಪ್ತಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 6:17 IST
Last Updated 10 ಡಿಸೆಂಬರ್ 2020, 6:17 IST
   

ಬೆಂಗಳೂರು: ನಗರದ 7 ಕಡೆಗಳಲ್ಲಿ ಕಳವು ಮಾಡಿದ್ದ ಆರೋಪಿ ರವಿಶಂಕರ್ (25) ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ ₹55 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.

‘ಕುಮಾರಸ್ವಾಮಿ ಲೇಔಟ್ ಬಳಿಯ ಚಂದ್ರಾ ನಗರ ನಿವಾಸಿಯಾದ ರವಿಶಂಕರ್, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.

‘ಕೃತ್ಯ ಎಸಗಿದ್ದ ನಂತರ, ಆಭರಣ ಮಾರಾಟ ಮಾಡಿದ್ದ ಆರೋಪಿ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸಿಸಿಬಿ ವಿಶೇಷ ತಂಡ ಆರೋಪಿಯನ್ನು ಬಂಧಿಸಿದೆ’

ADVERTISEMENT

‘ಹಲಸೂರು ಗೇಟ್, ಕೆ.ಆರ್.ಪುರ, ಎಲೆಕ್ಟ್ರಾನಿಕ್ ಸಿಟಿ, ಯಶವಂತಪುರ, ಹನುಮಂತನಗರ, ಶಿಡ್ಲಘಟ್ಟ ಹಾಗೂ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಆರೋಪಿ ಕೃತ್ಯ ಎಸಗಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.