ಬೆಂಗಳೂರು: ರಾಜರಾಜೇಶ್ವರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಬೆಳಿಗ್ಗೆ 10.30ಕ್ಕೆ ‘ಉದ್ಯೋಗ ಮೇಳ’ ಆಯೋಜಿಸಲಾಗಿದೆ.
50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿದ್ದು, 4 ಸಾವಿರ ಮಂದಿಗೆ ಉದ್ಯೋಗಾವಕಾಶ ಒದಗಿಸುವ ಗುರಿ ಇರಿಸಿಕೊಳ್ಳಲಾಗಿದೆ. 2019 ಬ್ಯಾಚ್ನ ಬಿಇ ಮತ್ತು ಎಂಬಿಎ ವಿದ್ಯಾರ್ಥಿಗಳ ಸಬಲೀಕರಣಕ್ಕಾಗಿ ಉದ್ಯೋಗ ಮೇಳ ಸಂಘಟಿಸಲಾಗುತ್ತದೆ.
ರಾಜರಾಜೇಶ್ವರಿ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಎ.ಸಿ.ಷಣ್ಮುಗಂ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾಂತ್ರಿಕ ಶಿಕ್ಷಣದ ವಿಭಾಗದ ನಿರ್ದೇಶಕ ಎಚ್.ಯು.ತಳವಾರ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.