ADVERTISEMENT

ಉದ್ಯೋಗ ಮೇಳ: 4 ಸಾವಿರ ಮಂದಿಗೆ ಉದ್ಯೋಗಾವಕಾಶ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 15:32 IST
Last Updated 17 ಆಗಸ್ಟ್ 2024, 15:32 IST
ಪದ್ಮನಾಭನಗರದಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ಉದ್ಯೋಗಾಕಾಂಕ್ಷಿಗಳೊಂದಿಗೆ ಚರ್ಚೆ ನಡೆಸಿದರು. ಎನ್‌.ಆರ್‌. ರಮೇಶ್‌ ಉಪಸ್ಥಿತರಿದ್ದರು
ಪದ್ಮನಾಭನಗರದಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರು ಉದ್ಯೋಗಾಕಾಂಕ್ಷಿಗಳೊಂದಿಗೆ ಚರ್ಚೆ ನಡೆಸಿದರು. ಎನ್‌.ಆರ್‌. ರಮೇಶ್‌ ಉಪಸ್ಥಿತರಿದ್ದರು   

ಬೆಂಗಳೂರು: ಭ್ರಷ್ಟಾಚಾರ ವಿರೋಧಿ ವೇದಿಕೆ ಹಾಗೂ ಎಂಎಲ್‌ಆರ್‌ ಕುಟುಂಬದ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಸುಮಾರು ನಾಲ್ಕು ಸಾವಿರ ಮಂದಿಗೆ ಉದ್ಯೋಗಾವಕಾಶ ಲಭಿಸಿದೆ.

ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನ ಮತ್ತು ಕಾರ್ಮೆಲ್‌ ಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ 12 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐ‌ಟಿಐ., ಡಿಪ್ಲೊಮಾ, ಎಂಜಿನಿಯರಿಂಗ್‌ ಪದವೀಧರ ಆಕಾಂಕ್ಷಿಗಳಿಗೆ  ಬಹುರಾಷ್ಟ್ರೀಯ ಕಂಪನಿಗಳು ನೇಮಕಾತಿ ಆದೇಶ ನೀಡಿದವು. ಉದ್ಯೋಗಾವಕಾಶ ಪಡೆದವರಲ್ಲಿ ಅಂಗವಿಕಲರೂ ಇದ್ದಾರೆ ಎಂದು ಉದ್ಯೋಗ ಮೇಳದ ನೇತೃತ್ವ ವಹಿಸಿದ್ದ ಬಿಬಿಎಂಪಿ ಮಾಜಿ ಸದಸ್ಯ ಎನ್‌.ಆರ್‌.ರಮೇಶ್‌ ತಿಳಿಸಿದರು.

ADVERTISEMENT

ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಅವರು ಉದ್ಯೋಗ ಮೇಳಕ್ಕೆ ಚಾಲನೆ ನೀಡಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದರು.

‘ಕಾಗದ ರಹಿತ ಕಾರ್ಯಕ್ರಮ’ ಉದ್ಯೋಗ ಮೇಳ ಇದಾಗಿದ್ದರಿಂದ, ‘ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ಆಫ್ ರೆಕಾರ್ಡ್‌’ ಅವರೂ ಮಾಹಿತಿ ಪಡೆದರು. 200ಕ್ಕೂ ಹೆಚ್ಚು ಕಾರ್ಪೊರೇಟ್ ಮತ್ತು  ಎಂಎನ್‌ಸಿ ಕಂಪನಿಗಳು ಪಾಲ್ಗೊಂಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.