ಬೆಂಗಳೂರು: ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪತ್ರಕರ್ತ, ಮಲ್ಲೇಶ್ವರದ ಗಾಯತ್ರಿ ನಗರದ ನಿವಾಸಿ ವಿಜೇಶ್ ಕಾಮತ್ (46) ಬುಧವಾರ ರಾತ್ರಿ ನಿಧನರಾದರು.
ಅವಿವಾಹಿತರಾಗಿದ್ದ ವಿಜೇಶ್, ಬಹಳ ವರ್ಷಗಳ ಹಿಂದೆಯೇ ತಂದೆಯನ್ನು ಕಳೆದುಕೊಂಡಿದ್ದರು. ಅವರ ತಾಯಿ ಕೂಡಾ ಮೂರು ವರ್ಷಗಳ ಹಿಂದೆ ನಿಧನರಾಗಿದ್ದರು. ತಂದೆ– ತಾಯಿಗೆ ವಿಜೇಶ್ ಒಬ್ಬನೇ ಪುತ್ರ.
ಆರೋಗ್ಯ ಹದಗೆಟ್ಟಿದ್ದ ಅವರನ್ನು ಬುಧವಾರ ಸಂಜೆ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲೇ ಅವರು ನಿಧನರಾಗಿದ್ದರು. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.