ADVERTISEMENT

ನ್ಯಾಯಮೂರ್ತಿ ಧರ್ಮಾಧಿಕಾರಿ ದಿಢೀರ್‌ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 19:34 IST
Last Updated 14 ಫೆಬ್ರುವರಿ 2020, 19:34 IST

ಮುಂಬೈ: ಬಾಂಬೈ ಹೈಕೋರ್ಟ್‌ನ ಹಿರಿಯ ನ್ಯಾಯಾಧೀಶರಲ್ಲೊಬ್ಬರಾದ ನ್ಯಾಯಮೂರ್ತಿ ಸತ್ಯರಂಜನ್‌ ಧರ್ಮಾಧಿಕಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ.

ವಕೀಲ ವೃತ್ತಿಯಲ್ಲಿ ತಮ್ಮದೇ ಛಾಪು ಮೂಡಿಸಿರುವ ಪ್ರತಿಷ್ಥಿತ ಧರ್ಮಾಧಿಕಾರಿ ಕುಟುಂಬದವರಾದ ಸತ್ಯರಂಜನ್‌, ಗುರುವಾರ ಸಂಜೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ, ಇವರ ರಾಜೀನಾಮೆ ಅಂಗೀಕಾರಗೊಂಡಿದೆಯೇ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ.

‘ಕೌಟುಂಬಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿದ್ದೇನೆ. ನನಗೆ ಮುಂಬೈ ಬಿಟ್ಟು ಹೋಗಲು ಮನಸ್ಸಿಲ್ಲ. ಇನ್ನೊಂದೆಡೆ ಮುಖ್ಯನ್ಯಾಯಮೂರ್ತಿ ಹುದ್ದೆಗೆ ನನಗೆ ಬಡ್ತಿಯನ್ನೂ ನೀಡುತ್ತಿಲ್ಲ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.