ಬೆಂಗಳೂರು: ನಗರದ ಕೆ.ಆರ್.ಮಾರುಕಟ್ಟೆ ಬಳಿಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಮಾಲೀಕ ಸಜೀವವಾಗಿ ದಹನವಾಗಿರುವುದಾಗಿ ಹೇಳಲಾಗುತ್ತಿದೆ
ಶುಕ್ರವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಬೆಂಕಿ ನಂದಿಸುತ್ತಿದ್ದಾರೆ.
'ಅಂಗಡಿಯೊಳಗೆ ಮಾಲೀಕ ಇದ್ದನೆಂದು ಸ್ಥಳೀಯರು ಹೇಳುತ್ತಿದ್ದಾರೆ. ಮಾಲೀಕನೂ ಬೆಂಕಿಯಲ್ಲಿ ಸುಟ್ಟು ಹೋಗಿರುವ ಸಾಧ್ಯತೆ ಇದೆ. ಬೆಂಕಿ ಕೆನ್ನಾಲಗೆ ಹೆಚ್ಚಿದ್ದು ನಂದಿಸುವ ಕೆಲಸ ನಡೆದಿದೆ' ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.