ಶಿಕ್ಷಣ ಮಾರ್ಗದರ್ಶಿ
ಕೆ.ಆರ್.ಪುರ: ಬೆಂಗಳೂರು ಪೂರ್ವ ತಾಲ್ಲೂಕು ಕನಕ ನೌಕರರ ಸಂಘದಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕುರುಬ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಂಜುಂಡಪ್ಪ ತಿಳಿಸಿದರು.
ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಕೆಲಸ ನಿರ್ವಹಿಸುವ ನೌಕರರ ಮಕ್ಕಳು ಅರ್ಜಿ ಸಲ್ಲಿಸಿಬೇಕು. ಆಸಕ್ತರು ಮೇ 30ರ ಒಳಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ ಮತ್ತು ಭಾವಚಿತ್ರ ಹಾಗೂ ವಿವರಗಳನ್ನು ಬರೆದು ಅಧ್ಯಕ್ಷ ನಂಜುಂಡಪ್ಪ, ಮೊಬೈಲ್ ಸಂಖ್ಯೆ 99454 69109, ಪ್ರಧಾನ ಕಾರ್ಯದರ್ಶಿ– ವೇದಮೂರ್ತಿ ಮೊಬೈಲ್ ಸಂಖ್ಯೆ 9740110201ಗೆ ವಾಟ್ಸ್ಆ್ಯಪ್ ಮಾಡಬಹುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.