ADVERTISEMENT

ಕಲಬುರ್ಗಿ ಹತ್ಯೆ: ಮತ್ತೊಬ್ಬ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 31 ಮೇ 2019, 20:15 IST
Last Updated 31 ಮೇ 2019, 20:15 IST

ಬೆಂಗಳೂರು: ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಕೃಷ್ಣಮೂರ್ತಿ ಎಂಬಾತನನ್ನು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್‌ ಕಾಳೆ ಎಂಬಾತನನ್ನು ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಕಸ್ಟಡಿಗೆ ಪಡೆಯಲಾಗಿತ್ತು. ಆತನೇ ಕೃಷ್ಣಮೂರ್ತಿ ಹೆಸರು ಬಾಯ್ಬಿಟ್ಟಿದ್ದಾನೆ ಎಂದು ಗೊತ್ತಾಗಿದೆ.

‘ವಶಕ್ಕೆ ಪಡೆದಿರುವ ಕೃಷ್ಣಮೂರ್ತಿ, ಹುಬ್ಬಳ್ಳಿ ನಿವಾಸಿ. ಆತ ಆರೋಪಿಗಳ ತಂಡದ ಜೊತೆ ಒಡನಾಟವಿಟ್ಟುಕೊಂಡಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಹುಬ್ಬಳ್ಳಿಗೆ ಶುಕ್ರವಾರ ಬೆಳಿಗ್ಗೆ ಹೋಗಿರುವ ವಿಶೇಷ ಅಧಿಕಾರಿಗಳು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.