ADVERTISEMENT

ಕಳಸಾ ಬಂಡೂರಿ ಕಾಮಗಾರಿ ಆರಂಭಿಸಲಾಗುವುದು: ಬಿ.ಎಸ್‌. ಯಡಿಯೂರಪ್ಪ 

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2020, 12:33 IST
Last Updated 28 ಫೆಬ್ರುವರಿ 2020, 12:33 IST
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ   

ಬೆಂಗಳೂರು: ಕಳಸಾ ಬಂಡೂರಿಗೆ ಯೋಜನೆಗೆ ಇದೇ ಬಜೆಟ್‌ ಅಧಿವೇಶನದಲ್ಲಿ ಅನುದಾನ ನೀಡುವುದರ ಜತೆಗೆ ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಮಹದಾಯಿ ನೀರು ಹಂಚಿಕೆಯ ಐತೀರ್ಪು ಅಧಿಸೂಚನೆ ಹೊರಡಿಸಿರುವುದರಿಂದ, ಈ ಯೋಜನೆ ಕೈಗೆತ್ತಿಕೊಳ್ಳಲು ಅನುಕೂಲವಾಗಿದೆ. ಈ ಅಧಿಸೂಚನೆ ಹೊರಡಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT