ಬೆಂಗಳೂರು: ‘ಪ್ರೀತಿ ನಿರಾಕರಿಸಿದರೆಂಬ ಕಾರಣಕ್ಕೆ 24 ವರ್ಷದ ಯುವತಿ ಮೇಲೆಆ್ಯಸಿಡ್ ಎರಚಿ ಪರಾರಿಯಾಗಿರುವ ಆರೋಪಿ ನಾಗೇಶ್ ಅಲಿಯಾಸ್ ನಾಗರಾಜ್ ಯಾವುದೇ ಸುಳಿವು ಬಿಟ್ಟಿಲ್ಲ’ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.
‘ಆರೋಪಿಯು ಪೂರ್ವ ಯೋಜಿತವಾಗಿ ದಾಳಿ ನಡೆಸಿದ್ದಾನೆ. ಈ ಪ್ರಕರಣವನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ. ಲುಕ್ಔಟ್ ಸಹ ಹೊರಡಿಸಲಾಗಿದ್ದು, ಹೊರ ರಾಜ್ಯಗಳಿಗೂ ವಿಶೇಷ ತಂಡಗಳನ್ನು ಕಳುಹಿಸಿದ್ದೇವೆ. ಅಲ್ಲಿನ ಠಾಣೆಗಳಿಗೂ ಆತನ ಕುರಿತ ಮಾಹಿತಿ ರವಾನಿಸಿದ್ದೇವೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.