ADVERTISEMENT

ಬಿ.ವಿ. ರಾಘವನ್‌ಗೆ ‘ಕನ್ನಡ ಅರವಿಂದ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 20:28 IST
Last Updated 12 ನವೆಂಬರ್ 2020, 20:28 IST

ಬೆಂಗಳೂರು: ಕನ್ನಡ ಗೆಳೆಯರ ಬಳಗವು ಕೊಡಮಾಡುವ ‘ಕನ್ನಡ ಅರವಿಂದ ಪ್ರಶಸ್ತಿ’ಗೆ ಕನ್ನಡ ಪರ ಹೋರಾಟಗಾರ ಬಿ.ವಿ ರಾಘವನ್ ಹಾಗೂ ‘ಕನ್ನಡ ಚಿರಂಜೀವಿ ಪ್ರಶಸ್ತಿ’ಗೆ ಕನ್ನಡ ಪರಿಚಾರಕ ಎಸ್. ಶಿವಲಿಂಗಯ್ಯ ಆಯ್ಕೆಯಾಗಿದ್ದಾರೆ.

ಬಳಗವು ಡಿ.6ರಂದು ಬಸವನಗುಡಿಯ ನ್ಯಾಷನಲ್ ಸ್ಕೂಲ್ ವೃತ್ತದಲ್ಲಿರುವ ಬಿ.ಎಂ.ಶ್ರೀ ಪ್ರತಿಮೆ ಎದುರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧಿಕ ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಗುವುದು. ತಮಿಳುನಾಡಿನ ಗುಮ್ಮಳಾಪುರದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶೇ 100ರಷ್ಟು ಫಲಿತಾಂಶಕ್ಕೆ ಕಾರಣರಾದ ಮುಖ್ಯೋಪಾಧ್ಯಾಯ ಪಿ. ವೆಂಕಟೇಶ್ ಅವರನ್ನು ಗೌರವಿಸಲಾಗುವುದು ಎಂದು ಸಂಚಾಲಕ ರಾ.ನಂ. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.