ಬೆಂಗಳೂರು: ‘ಇಲ್ಲಿನ ಭೂಮಿ ಮತ್ತು ನೀರನ್ನು ಬಳಸಿಕೊಂಡು ಎತ್ತರಕ್ಕೆ ಬೆಳೆ ದಿರುವ ಭಾರತೀಯ ವಿಜ್ಞಾನ ಸಂಸ್ಥೆಯು ನೇಮಕಾತಿಯ ವಿಷಯದಲ್ಲಿ ಕನ್ನಡಿಗರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದರು.
ಐಐಎಸ್ಸಿ ಜತೆಗೆ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತ ನಾಡಿದ ಅವರು, ‘ಕನ್ನಡ ಅನುಷ್ಠಾನದ ವಿಷಯದಲ್ಲಿ ಕೇವಲ ಕಣ್ಣೊರೆಸುವ ತಂತ್ರ ಅನುಸರಿಸಲಾಗುತ್ತಿದೆ. ರಾಜ್ಯ ಸರ್ಕಾರವು ಸಂಸ್ಥೆಗೆ ಈ ಮೊದಲು 440 ಎಕರೆ ನೀಡಿತ್ತು. ಇತ್ತೀಚೆಗೆ ಚಿತ್ರದುರ್ಗದ ಸಮೀಪ 1,500 ಎಕರೆ ಒದಗಿಸಿದೆ. ಇಷ್ಟು ದೊಡ್ಡ ಮಟ್ಟದ ಜಾಗ ನೀಡಿರುವುದು ಕನ್ನಡಿಗರನ್ನು ಕಡೆಗಣಿಸಲಿಕ್ಕಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.