ADVERTISEMENT

ಸರ್ವಜ್ಞನ ಪ್ರತಿಮೆ ಸ್ಥಾಪನೆ ಬಗ್ಗೆ ಬಿಬಿಎಂಪಿಗೆ ಕನ್ನಡ ಅಭಿವೃದ ಪ್ರಾಧಿಕಾರ ಪತ್ರ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 6:18 IST
Last Updated 11 ಡಿಸೆಂಬರ್ 2020, 6:18 IST
   

ಬೆಂಗಳೂರು: ಸರ್ವಜ್ಞನ ಪ್ರತಿಮೆ ಸ್ಥಾಪನೆ, ರಸ್ತೆಗಳಿಗೆ ಹೆಸರಿಸುವ ಮತ್ತು ತ್ರಿಪದಿ ಫಲಕ ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞನ ಹೆಸರಿನಲ್ಲಿ ಯಾವುದೇ ಸ್ಮಾರಕ ಇಲ್ಲ. ಅವರ ಕಂಚಿನ ಪ್ರತಿಮೆ ಸ್ಥಾಪಿಸುವ, ಯಾವುದಾದರೂ ಪ್ರಮುಖ ರಸ್ತೆಗೆ ಅವರ ಹೆಸರಿಡುವ ಕುರಿತು ಮತ್ತು ಉದ್ಯಾನಗಳಲ್ಲಿ ಸರ್ವಜ್ಞನ ತ್ರಿಪದಿ ಫಲಕ ಅಳವಡಿಸುವಂತೆ ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದೆ. ಇದನ್ನು ಆಧರಿಸಿ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು, ಕ್ರಮ ಕೈಗೊಂಡು 7 ದಿನಗಳಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT