ADVERTISEMENT

ಕನ್ನಡ ಭವನಕ್ಕೆ ಅಡ್ಡಗಾಲು: ಧರಣಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2019, 19:58 IST
Last Updated 13 ಜನವರಿ 2019, 19:58 IST

ಬೆಂಗಳೂರು: ನ್ಯಾಷನಲ್ ಕಾಲೇಜು ಮೆಟ್ರೊ ನಿಲ್ದಾಣದ ಸಮೀ‍ಪದಲ್ಲಿ ಕನ್ನಡ ಭವನ ನಿರ್ಮಿಸುವುದಕ್ಕೆ ಅಡ್ಡಗಾಲು ಹಾಕುತ್ತಿರುವುದನ್ನು ಖಂಡಿಸಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕರ್ತರು ಭಾನುವಾರ ಧರಣಿ ಆರಂಭಿಸಿದರು.

ಸಾಹಿತಿ ಚಂದ್ರಶೇಖರ ಪಾಟೀಲ, ‘ಪ್ರತಿಯೊಂದಕ್ಕೂ ಹೋರಾಟ ಮಾಡುವ ಸ್ಥಿತಿ ಇರುವುದು ಕರ್ನಾಟಕದಲ್ಲಿ ಮಾತ್ರ. ಈ ವಿಚಾರದಲ್ಲೂ ಹೋರಾಟ ಅನಿವಾರ್ಯ‍’ ಎಂದರು.

‘ಯಾರೇ ಅಡ್ಡಗಾಲು ಹಾಕಿದರೂ ಕನ್ನಡ ಭವನ ನಿರ್ಮಿಸಿಯೇ ತೀರುತ್ತೇವೆ’ ಎಂದು ಪರಿಷತ್‌ ಅಧ್ಯಕ್ಷ ಮಾಯಣ್ಣ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.