ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹೊಸದಾಗಿ ‘ಕನ್ನಡ ಕಾಯಕ ದತ್ತಿ ಪ್ರಶಸ್ತಿ’ಯನ್ನು ಸ್ಥಾಪಿಸಲಾಗಿದೆ. ಕನ್ನಡ ಪರ ಹೋರಾಟಗಾರರು, ನಾಡಿನ ಕುರಿತು ಕೃತಿ ರಚಿಸಿದವರು ಹಾಗೂ ಕನ್ನಡ ರಂಗಭೂಮಿ ಕಲಾವಿದರ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.
ವ.ಚ. ಚನ್ನೇಗೌಡ ಅವರು ದತ್ತಿ ದಾನಿಗಳಾಗಿದ್ದು, ಅವರು ಪರಿಷತ್ತಿನಲ್ಲಿ ₹ 7.20 ಲಕ್ಷ ದತ್ತಿನಿಧಿ ಸ್ಥಾಪಿಸಿದ್ದಾರೆ. ಈ ಪ್ರಶಸ್ತಿಗೆ ಪ್ರತಿ ವರ್ಷ ಮೂವರನ್ನು ಗುರುತಿಸಿ, ಗೌರವಿಸಲಾಗುತ್ತದೆ. ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿರಲಿದೆ ಎಂದು ಪ್ರಕಟಣೆ ತಿಳಿಸಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.