ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಡೆಸಿದ 2023–24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ.
ಫಲಿತಾಂಶದ ಪಟ್ಟಿಯನ್ನು ಪರಿಷತ್ತಿನ ಅಂತರ್ಜಾಲ ತಾಣ kannadasahithyaparishattu.inನಲ್ಲಿ ಪ್ರಕಟಿಸಲಾಗಿದೆ. ಎಲ್ಲ ಅಭ್ಯರ್ಥಿಗಳಿಗೆ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಶೀಘ್ರದಲ್ಲಿಯೇ ನೋಂದಾಯಿತ ಅಂಚೆ ಮೂಲಕ ಕಳುಹಿಸಿ ಕೊಡಲಾಗುತ್ತದೆ. ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅಂಕಪಟ್ಟಿಗಳು ಕಳುಹಿಸಿದ ದಿನಾಂಕದಿ೦ದ ಒಂದು ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
ಸಂಪರ್ಕಕ್ಕೆ: 080 26623584 ಅಥವಾ 26612991
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.