ADVERTISEMENT

ಕಸಾಪ ಆಡಳಿತ ಪಾರದರ್ಶಕ: ಮಹೇಶ ಜೋಶಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2025, 14:21 IST
Last Updated 2 ಅಕ್ಟೋಬರ್ 2025, 14:21 IST
ಮಹೇಶ ಜೋಶಿ
ಮಹೇಶ ಜೋಶಿ   

ಬೆಂಗಳೂರು: ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಆಡಳಿತ ಪಾರದರ್ಶಕವಾಗಿದೆ. ದಾಖಲೆಗಳು ನಿಖರವಾಗಿದ್ದು, ಯಾವುದೇ ರೀತಿಯ ತನಿಖೆಗೆ ಸದಾ ಸಿದ್ದ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. 

‘ಹೈಕೋರ್ಟ್ ಆದೇಶದಂತೆ ಇದೇ 5 ರಂದು ವಾರ್ಷಿಕ ಸಾಮಾನ್ಯ ಸಭೆ ನಡೆಸಿ, ಅಲ್ಲಿ ಕಾನೂನಾತ್ಮಕ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ವರದಿಯನ್ನು ಇದೇ 14ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುತ್ತದೆ. ಅಲ್ಲಿಯವರೆಗೆ ಸರ್ಕಾರವು ಕಸಾಪ ಅಧ್ಯಕ್ಷರ ವಿರುದ್ಧ ಕ್ರಮ ತೆಗೆದುಕೊಳ್ಳದೆ, ತನ್ನ ನಿಲುವನ್ನು ವರದಿಯ ಮೂಲಕ ತಿಳಿಸಬೇಕೆಂದು ಕೋರ್ಟ್ ನಿರ್ದೇಶಿಸಿದೆ. ಈ ನಡುವೆ ಕಸಾಪ ವಿರುದ್ಧ ಉದ್ದೇಶ ಪೂರ್ವಕವಾಗಿ ತಪ್ಪು ಮಾಹಿತಿಗಳನ್ನು ಹರಿಬಿಡಲಾಗುತ್ತಿದೆ’ ಎಂದು ಹೇಳಿದ್ದಾರೆ.  

‘ತನಿಖೆಗಳ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಲುವು ಇನ್ನಷ್ಟು ಸ್ಪಷ್ಟವಾಗಲಿದ್ದು. ಕಳಂಕರಹಿತವಾಗಿ ಹೊರ ಬರಲು ಇದೊಂದು ಸದಾವಕಾಶವೆಂದು ಭಾವಿಸಿ ಮುನ್ನಡೆಯಲಾಗುತ್ತದೆ’ ಎಂದು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.