ADVERTISEMENT

‘ರಾಜ್ಯದ ಕ್ರೀಡೆಗಳಿಗೆ ಮಾತ್ರ ಕ್ರೀಡಾಂಗಣ ಸೀಮಿತಗೊಳಿಸಿ’

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 19:23 IST
Last Updated 9 ಜುಲೈ 2019, 19:23 IST

ಬೆಂಗಳೂರು:ಕಂಠೀರವ ಹೊರಾಂಗಣ ಕ್ರೀಡಾಂಗಣವನ್ನು ರಾಜ್ಯದ ಅಥ್ಲೆಟಿಕ್ಸ್ ಕ್ರೀಡೆಗಳಿಗೆ ಮಾತ್ರ ಸೀಮಿತಗೊಳಿಸಬೇಕೆಂದು ಜಯಕರ್ನಾಟಕ ಸಂಘಟನೆ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ‌ರಾಜ್ಯ ಘಟಕದ ಅಧ್ಯಕ್ಷ ಆರ್‌.ಚಂದ್ರಪ್ಪ,‘ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್‌ ಮತ್ತು ಇತರ ಸಂಘ ಸಂಸ್ಥೆಗಳು ಕ್ರೀಡಾಂಗಣದ ಸ್ಥಳ ಉಪಯೋಗಿಸಲು ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಕರ್ನಾಟಕ ಅಥ್ಲೆಟಿಕ್ಸ್ ಸಂಘಕ್ಕೆ ಯಾವುದೇ ಸೌಲಭ್ಯ ನೀಡದೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಲತಾಯಿ ಧೋರಣೆ ಕ್ರಮ ಅನುಸರಿಸಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT