ಬೆಂಗಳೂರು:ನಗರದ ಉದ್ಯಮಿ ಕಪಾಲಿ ಮೋಹನ್ ಅವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೀಣ್ಯ ಬಸವೇಶ್ವರ ನಿಲ್ದಾಣದ ಸುಪ್ರೀಂ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸುಪ್ರೀಂ ಹೋಟೆಲ್ ಕಪಾಲಿ ಮೋಹನ್ ಅವರದ್ದೇ ಆಗಿತ್ತು.
ಈ ಹಿಂದೆ ಸಿಸಿಬಿ ಪೊಲೀಅರು ಕಪಾಲಿ ಮೋಹನ್ ಮನೆ ಮೇಲೆ ರೇಡ್ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗಂಗಮ್ಮನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.