ADVERTISEMENT

ಕಾಪು ಸಿದ್ದಲಿಂಗಸ್ವಾಮಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ನೇಮಕ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 20:31 IST
Last Updated 18 ಜುಲೈ 2021, 20:31 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾಪು ಸಿದ್ಧಲಿಂಗಸ್ವಾಮಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸದ್ಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರುತಿ ಅವರ ನೇಮಕಾತಿಯನ್ನು ಹಿಂಪಡೆದು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನವರಾದ ಸಿದ್ಧಲಿಂಗಸ್ವಾಮಿ ಅವರನ್ನು ನೇಮಿಸಲಾಗಿದೆ.

ಕಾಪು ಸಿದ್ದಲಿಂಗಸ್ವಾಮಿ ಬಹಳ ವರ್ಷ ಯಡಿಯೂರಪ್ಪ ಅವರಿಗೆ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು. ಯಡಿಯೂರಪ್ಪ ಅವರು ಕೆ.ಜೆ.ಪಿ ಮಾಡಿದಾಗ ವರುಣಾಕ್ಷೇತ್ರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದ್ದರು. ಪಕ್ಷಕ್ಕಾಗಿ ಕೆಲಸ ಮಾಡಿದ ಶೃತಿ ಅವರನ್ನು ತೆಗೆದು, ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಿದ್ದು, ಪಕ್ಷದ ವಲಯದಲ್ಲಿ ಸಾಕಷ್ಟು ಟೀಕೆಗೆ ಕಾರಣವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.