ಬೆಂಗಳೂರು: ತಿಗಳರಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜರುಗಿದ್ದ ಕರಗ ಮಹೋತ್ಸವದ ಮೆರವಣಿಗೆ ವೀಕ್ಷಿಸಲು ಹೋಗಿದ್ದ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಸಂತ್ರಸ್ತ ಮಹಿಳೆಯ ಪತಿ ಕಳ್ಳತನದ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಚಿಕ್ಕಪೇಟೆಯ ದಂಪತಿ, ಏಪ್ರಿಲ್ 23ರಂದು ರಾತ್ರಿ ಕರಗ ಮಹೋತ್ಸವದ ಮೆರವಣಿಗೆ ನೋಡಲು ಹೋಗಿದ್ದರು. ದೇವಸ್ಥಾನದ ಆವರಣದಲ್ಲಿ ಉಂಟಾಗಿದ್ದ ನೂಕುನುಗ್ಗಲಿನಲ್ಲಿ ಸಿಲುಕಿದ್ದರು. ಇದೇ ಸಂದರ್ಭದಲ್ಲಿಯೇ ಚಿನ್ನಾಭರಣ ಕಳ್ಳತನವಾಗಿರುವುದಾಗಿ ದೂರುದಾರರು ಹೇಳುತ್ತಿದ್ದಾರೆ’ ಎಂದು ತಿಳಿಸಿದರು.
‘₹ 4.50 ಲಕ್ಷ ಮೌಲ್ಯದ ಎರಡು ಚಿನ್ನದ ಸರಗಳು ಕಳ್ಳತನ ಆಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ’ ಎಂದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.