ಬೆಂಗಳೂರು:ಅಖಿಲ ಕರ್ನಾಟಕ ಸ್ಪೋಟ್ಸ್ ಕರಾಟೆ ಅಸೋಸಿಯೇಷನ್ಅ.5 ರಿಂದ 27ರವರೆಗೆ ಚಾಮರಾಜಪೇಟೆಯ ರಾಜೀವ್ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಕರಾಟೆ ಲೀಗ್ ಆಯೋಜಿಸಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಜೆ. ಭಾರ್ಗವ ರೆಡ್ಡಿ, ‘ಶನಿವಾರ ಸಂಜೆ 4 ಗಂಟೆಗೆ ಸಂಸದ ತೇಜಸ್ವಿ ಸೂರ್ಯ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ.ಪ್ರತಿ ಶನಿವಾರ ಮತ್ತು ಭಾನುವಾರ ಪಂದ್ಯಾವಳಿ ನಡೆಯಲಿದೆ. ಲೀಗ್ನಲ್ಲಿ 8 ತಂಡಗಳು ಭಾಗವಹಿಸಲಿವೆ. 56 ಲೀಗ್ ಪಂದ್ಯಗಳು, 4 ಪ್ಲೇ ಆಫ್ ಪಂದ್ಯಗಳು ನಡೆಯಲಿವೆ’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.