ADVERTISEMENT

‘ಕರಾವಳಿ ಸಿರಿ’ ಪ್ರಶಸ್ತಿಗೆ ರತ್ನಪ್ರಭಾ, ಮೋಹನ್ ಆಳ್ವ ಆಯ್ಕೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2019, 20:14 IST
Last Updated 26 ಸೆಪ್ಟೆಂಬರ್ 2019, 20:14 IST
ಎಂ. ಮೋಹನ್‌ ಆಳ್ವ ಹಾಗೂ ಕೆ.ರತ್ನಪ್ರಭಾ
ಎಂ. ಮೋಹನ್‌ ಆಳ್ವ ಹಾಗೂ ಕೆ.ರತ್ನಪ್ರಭಾ   

ಬೆಂಗಳೂರು: ಕನ್ನಡ ಕರಾವಳಿ ವೇದಿಕೆ ನೀಡುವ ‘ಕರಾವಳಿ ಸಿರಿ’ ಪ್ರಶಸ್ತಿಗೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ. ಮೋಹನ್ ಆಳ್ವ ಆಯ್ಕೆಯಾಗಿದ್ದಾರೆ.

ವೇದಿಕೆಯ ಅಧ್ಯಕ್ಷ ರವಿರಾಜ್ ಎಸ್. ಶೆಟ್ಟಿ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಶನಿವಾರ (ಸೆ. 28) ಸಂಜೆ 4ಕ್ಕೆ ಆರ್‌.ಪಿ.ಸಿ. ಬಡಾವಣೆಯ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸಮಾರಂಭ ಉದ್ಘಾಟಿಸಲಿದ್ದು, ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.