ADVERTISEMENT

ಅಶ್ವತ್ಥನಾರಾಯಣ ಪುನರಾಯ್ಕೆ: ಕಾರ್ಯಕರ್ತರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 13 ಮೇ 2023, 19:31 IST
Last Updated 13 ಮೇ 2023, 19:31 IST
ಮಲ್ಲೇಶ್ವರದ ಶಾಸಕರ ಕಚೇರಿ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು.
ಮಲ್ಲೇಶ್ವರದ ಶಾಸಕರ ಕಚೇರಿ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು.   

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶನಿವಾರ ಸಂಭ್ರಮಿಸಿದರು.

ಮಲ್ಲೇಶ್ವರದಲ್ಲಿರುವ ಶಾಸಕರ ಕಚೇರಿ ಬಳಿ ಜಮಾಯಿಸಿದ ಜನರು ಕುಣಿದು ಕುಪ್ಪಳಿಸಿ ಸಂಭ್ರಮಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಿ. ಎನ್. ಅಶ್ವತ್ಥನಾರಾಯಣ, ‘ಕ್ಷೇತ್ರದ ಪ್ರತಿನಿಧಿಯಾಗಿ ಏನೇನು ಕೆಲಸಗಳು ಆಗಬೇಕಿದೆಯೋ ಅದನ್ನು ಮುಂದುವರಿಸುತ್ತೇನೆ. ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸೇರಿ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಹಿಂದಿನಂತೆಯೇ ಒತ್ತು ನೀಡುತ್ತೇನೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.