ರಾಜರಾಜೇಶ್ವರಿನಗರ: ‘ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ನ ಕೆಲವರನ್ನು ನೆಪಮಾತ್ರಕ್ಕೆ ಸಚಿವರಾಗಿ ಮಾಡಿದ್ದರು. ಕೆಲಸ ಮಾಡಲು ಬಿಡದ ಕಾರಣ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಉಲ್ಲಾಳು ವಾರ್ಡ್ನ ನಾಗದೇವನಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಸೋಮಶೇಖರ್ ಬೆಂಬಲಿಗರ ಸಭೆಯಲ್ಲಿ ಅವರು ಮಾತನಾಡಿದರು.
ಅವರು, ಬಿಜೆಪಿಗೆ ಬಂದ ಮೇಲೆ ನಮ್ಮ ಕುಟುಂಬದ ಸದಸ್ಯರಂತೆ’ ಎಂದರು. ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್, ಮೈತ್ರಿ ಸರ್ಕಾರದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿ ಎಂದು ಮನವಿ ಮಾಡಿದರೂ ಕವಡೆ ಕಾಸಿನ ಬೆಲೆ ಸಿಗುತ್ತಿರಲಿಲ್ಲ’ ಎಂದರು.
ಬಿಜೆಪಿ ಮುಖಂಡ ಅಶ್ವತ್ಥ್ ನಾರಾಯಣ, ಪಾಲಿಕೆ ಸದಸ್ಯರಾದ ಶಾರದಾ ಮುನಿರಾಜು, ಆರ್ಯಶ್ರೀನಿವಾಸ್, ಸತ್ಯನಾರಾಯಣ, ರಾಜಣ್ಣ, ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಿ.ಎಂ.ಮಾರೇಗೌಡ, ಮುಖಂಡರಾದ ಎ.ಶಿವಕುಮಾರ್, ಪಂಚಲಿಂಗಯ್ಯ, ಪುರಸಭೆ ಮಾಜಿ ಉಪಾಧ್ಯಕ್ಷ ಜಿ.ಮುನಿರಾಜು, ಮೈಲಸಂದ್ರ ಮುನಿರಾಜು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪುಷ್ಪಲತಾ ಪರಮಶಿವಯ್ಯ ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.