ADVERTISEMENT

ಖರ್ಗೆಯನ್ನು ಸೋಲಿಸಿದ್ದೆ, ಪ್ರಿಯಾಂಕ್‌ರನ್ನೂ ಸೋಲಿಸುವೆ: ಬಾಬುರಾವ್ ಚಿಂಚನಸೂರ್

ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುತ್ತೇನೆ ಎನ್ನುವುದು ಸುಳ್ಳು ಸುದ್ದಿ: ಚಿಂಚನಸೂರ್‌

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2023, 9:48 IST
Last Updated 14 ಫೆಬ್ರುವರಿ 2023, 9:48 IST
ಬಾಬುರಾವ್‌ ಚಿಂಚನಸೂರ್‌ (ಪ್ರಜಾವಾಣಿ ಚಿತ್ರ)
ಬಾಬುರಾವ್‌ ಚಿಂಚನಸೂರ್‌ (ಪ್ರಜಾವಾಣಿ ಚಿತ್ರ)   

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಪ್ರಿಯಾಂಕ ಖರ್ಗೆ ಅವರನ್ನು ಸೋಲಿಸುವುದಾಗಿ ವಿಧಾನಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಅವರು ತೊಡೆ ತಟ್ಟುವ ಮೂಲಕ ಸವಾಲು ಹಾಕಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವುದಾಗಿ ತೊಡೆ ತಟ್ಟಿ ಸವಾಲು ಹಾಕಿದ್ದೆ, ಅದೇ ಪ್ರಕಾರ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದೆವು ಎಂದು ಅವರು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ADVERTISEMENT

ಪಕ್ಷ ನನಗೆ ತಾಯಿ ಇದ್ದಂತೆ, ತಾಯಿಗೆ ದ್ರೋಹ ಮಾಡುವ ಪ್ರಶ್ನೆಯೇ ಇಲ್ಲ ಎಂದು ಚಿಂಚನಸೂರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.