ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವರ ವಿವೇಚನಾ ಕೋಟಾದಲ್ಲಿ 28 ವಿಧಾನಸಭೆ ಕ್ಷೇತ್ರಗಳಿಗೆ ₹280 ಕೋಟಿ ಬಿಡುಗಡೆ ಮಾಡಿದ್ದಾರೆ.
ಪಕ್ಷಭೇದ ಮರೆತು ಎಲ್ಲ ವಿಧಾನಸಭೆ ಕ್ಷೇತ್ರಗಳಿಗೆ ತಲಾ ₹10 ಕೋಟಿ ಬಿಡುಗಡೆ ಮಾಡಿದ್ದು, ಈ ಹಣದಲ್ಲಿ ರಸ್ತೆ ದುರಸ್ತಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕಾಮಗಾರಿಗಳನ್ನು ನಡೆಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ.
ಅನುದಾನ ಬಿಡುಗಡೆ ಮಾಡಿ ಫೆ.13ರಂದು ಟಿಪ್ಪಣಿಯನ್ನು ಮುಖ್ಯ ಆಯುಕ್ತರಿಗೆ ಕಳುಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.