ADVERTISEMENT

ವಿಪತ್ತು ನಿರ್ವಹಣೆ: ಅಫಿಡವಿಟ್ ಸಲ್ಲಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 16:54 IST
Last Updated 7 ಜನವರಿ 2021, 16:54 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ರಾಜ್ಯದಲ್ಲಿ ವಿಪತ್ತು ತಡೆ ಮತ್ತು ನಿರ್ವಹಣಾ ನಿಧಿ ಸ್ಥಾಪನೆ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

‘2019ರ ಜುಲೈನಿಂದ ಈ ನಿಟ್ಟಿನಲ್ಲಿ ಹೊರಬಿದ್ದ ಆದೇಶಗಳು ಪಾಲನೆಯಾಗಿಲ್ಲ. ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಅನುಷ್ಠಾನಗೊಳಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

‘2005ರ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕೋವಿಡ್ ಅನ್ನು ವಿಪತ್ತು ಎಂದು ಒಪ್ಪಿಕೊಂಡರೂ ಅದಕ್ಕೆ ತಕ್ಕಂದ ನಿಬಂಧನೆಗಳನ್ನು ಜಾರಿಗೆ ತರಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಅದು ಕಾಗದದಲ್ಲೇ ಉಳಿಯಿತು’ ಎಂದು ಪೀಠ ಹೇಳಿತು.

ADVERTISEMENT

ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸುವಂತೆ ತಿಳಿಸಿದ ಪೀಠ, ಜ.27ಕ್ಕೆ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.