ಬೆಂಗಳೂರು: ಶನಿವಾರದ ಕರ್ನಾಟಕ ಬಂದ್ ಸಂದರ್ಭದಲ್ಲಿ ಮಾಸ್ಕ್ ಧರಿಸದ ಮತ್ತು ಅಂತರ ಕಾಪಾಡದವರಿಗೆ ದಂಡ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಬಂದ್ ಎಂದರೆ ಸಹಜವಾಗಿ ಜನಸಮೂಹ ಸೇರುತ್ತದೆ. ಈ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಆಗುವುದನ್ನು ತಡೆಯಲು ಪೊಲೀಸರು ಮತ್ತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.
ರಾಜಕೀಯ ರ್ಯಾಲಿಗಳಲ್ಲಿ ಭಾಗವಹಿಸಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿರುವ ಅಂಕಿ–ಅಂಶ ಸಲ್ಲಿಸದ ಮತ್ತು ಅವರನ್ನು ವಿಚಾರಣೆಗೆ ಒಳಪಡಿಸದ ಸರ್ಕಾರವನ್ನು ಪೀಠ ತರಾಟೆಗೆ ತೆಗೆದುಕೊಂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.