ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ನೀಡಲು ₹33.65 ಕೋಟಿ ಮೊತ್ತವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಕೋವಿಡ್–19ನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಆರ್ಥಿಕ ವರ್ಷದಲ್ಲಿ ಯಾವುದೇ ನಿರ್ಬಂಧ ವಿಧಿಸದೇ ಸಂಬಂಧಪಟ್ಟ ದೇವಾಲಯಗಳಿಗೆ ತಡ ಮಾಡದೇ ತಹಶೀಲ್ದಾರರು ದೇವಸ್ಥಾನಗಳ ಖಾತೆಯಿಂದ ಅರ್ಚಕರ ಖಾತೆಗಳಿಗೆ ಜಮೆ ಮಾಡಲು ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. 2020–21 ನೇ ಸಾಲಿನ ಆಯವ್ಯಯದಲ್ಲಿ ತಸ್ತೀಕ್ ಭತ್ಯೆ ಯೋಜನೆಯಡಿ ₹134.62 ಕೋಟಿ ಅನುದಾನ ನಿಗದಿ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.