ADVERTISEMENT

ಶಿವಪ್ರಕಾಶ್‌ಗೆ ನಾಟಕ ಅಕಾಡೆಮಿ ಪುಸ್ತಕ ಬಹುಮಾನ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2022, 16:18 IST
Last Updated 29 ಮಾರ್ಚ್ 2022, 16:18 IST
ಎಂ.ಎಂ. ಶಿವಪ್ರಕಾಶ್
ಎಂ.ಎಂ. ಶಿವಪ್ರಕಾಶ್   

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ನೀಡುವ 2020ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಲೇಖಕ ಎಂ.ಎಂ. ಶಿವಪ್ರಕಾಶ್ ಅವರ ‘ರಂಗದಿಗ್ಗಜ ಕೋಗಳಿ ಪಂಪಣ್ಣ’ ಕೃತಿ ಆಯ್ಕೆಯಾಗಿದೆ.

ಈ ಬಹುಮಾನವು ₹ 25 ಸಾವಿರ ನಗದು ಒಳಗೊಂಡಿದೆ. ರಂಗಪಠ್ಯಗಳ ಹೊರತಾಗಿ ಕನ್ನಡ ರಂಗಭೂಮಿಯ ಬಗ್ಗೆ ಬರಹಗಳನ್ನು ಮತ್ತು ಪುಸ್ತಕಗಳನ್ನು ಉತ್ತೇಜಿಸುವ ಸಲುವಾಗಿ ರಂಗಭೂಮಿ ಕುರಿತಾದ ಪುಸ್ತಕವೊಂದಕ್ಕೆ ಬಹುಮಾನ ನೀಡಲಾಗುತ್ತಿದೆ.

ಏಪ್ರಿಲ್‌ನಲ್ಲಿ ಬಳ್ಳಾರಿಯಲ್ಲಿ ನಡೆಯುವ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುಸ್ತಕ ಬಹುಮಾನ ನೀಡಲಾಗುವುದು ಎಂದು ಅಕಾಡೆಮಿ ರಿಜಿಸ್ಟ್ರಾರ್ ಬಿ. ಮಂಜುನಾಥ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.