ಬೆಂಗಳೂರು:ಚುನಾವಣಾನೀತಿಸಂಹಿತೆ ಕಾರಣ ಮುಂದೂಡಲಾಗಿದ್ದ ಪ್ರಸಕ್ತ ಸಾಲಿನರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 15ರಂದು ನಡೆಯಲಿದೆ.
ಸಾಹಿತ್ಯ, ಸಿನಿಮಾ, ಕ್ರೀಡೆ, ಸಮಾಜಸೇವೆ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 63 ಮಂದಿ ಸಾಧಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಾರಿ 63ನೇ ರಾಜ್ಯೋತ್ಸವವಾಗಿರುವುದರಿಂದಅಷ್ಟೇ ಸಂಖ್ಯೆಯ ಸಾಧಕರಿಗೆ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದುಮೂಲಗಳು ತಿಳಿಸಿವೆ.ತಾಯಿ ಭುವನೇಶ್ವರಿಯ ಪ್ರತಿಮೆ, ನಗದು, ಫಲಕ, ಶಾಲು ಹಾಗೂ ಪ್ರಮಾಣಪತ್ರ ನೀಡಿ ಸನ್ಮಾನಿಸುವುದು ವಾಡಿಕೆಯಾಗಿದೆ.
ಮೂರು ಲೋಕಸಭೆ ಹಾಗೂ ಎರಡು ವಿಧಾನಸಬಾ ಕ್ಷೇತ್ರಗಳ ಉಪಚುನಾವಣೆ ಕಾರಣನಿಗದಿಯಂತೆ ನವೆಂಬರ್ 1ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ.ಇದೀಗ ಐದು ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡು ನೀತಿ ಸಂಹಿತೆ ಅವಧಿ ಮುಗಿದಿರುವ ಕಾರಣ ರಾಜ್ಯ ಸರ್ಕಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದೆ.
ಇತ್ತೀಚಿನ ವರ್ಷಗಳಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗುತ್ತದೆ. ಈ ಸಮಿತಿಯಲ್ಲಿ ಕೆಲವು ವಿವಿಧ ಕ್ಷೇತ್ರಗಳ ಸದಸ್ಯರನ್ನು ನೇಮಕ ಮಾಡಲಾಗುತ್ತದೆ.ಈ ಸಮಿತಿಯು ನೀಡುವ ಪಟ್ಟಿಯನ್ನೇ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಪರಿಗಣಿಸುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.