ADVERTISEMENT

ಕಾರವಾರ ಎಕ್ಸ್‌ಪ್ರೆಸ್ ಸಂಚಾರ ರದ್ದು

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 19:54 IST
Last Updated 6 ಆಗಸ್ಟ್ 2019, 19:54 IST
   

ಬೆಂಗಳೂರು: ಭಾರಿ ಮಳೆಯ ಕಾರಣದಿಂದ ಯಶವಂತಪುರ–ಕಾರವಾರ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಬೆಳಿಗ್ಗೆ 7.10ಕ್ಕೆ ಯಶವಂತಪುರದಿಂದ ಹೊರಟು ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ, ಮಂಗಳೂರು ಮಾರ್ಗವಾಗಿ ರಾತ್ರಿ 11.25ಕ್ಕೆ ಕಾರವಾರ ತಲುಪಬೇಕಿದ್ದ ರೈಲು ಸಂಚಾರವನ್ನು ಬುಧವಾರದ ಮಟ್ಟಿಗೆ ರದ್ದುಗೊಳಿಸಲಾಗಿದೆ.

ಮಂಗಳವಾರ ಸಂಜೆ 4.30ಕ್ಕೆ ಹೊರಟ ಯಶವಂತಪುರ– ಮಂಗಳೂರು ರೈಲು ಸಂಚಾರವನ್ನು ಹಾಸನದಲ್ಲೇ ಮೊಟುಕುಗೊಳಿಸಲಾಗಿದೆ. ಬೆಂಗಳೂರು–ಕಣ್ಣೂರು ರೈಲು ಸಂಚಾರವನ್ನು ಜೋಲಾರಪೇಟೆ– ಪಾಲ್ಘಾಟ್–ಶೋರ್ನೂರ್‌–ಮಂಗಳೂರು ಮಾರ್ಗದಲ್ಲಿ ಸಂಚರಿಸಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.