ಬೆಂಗಳೂರು: ಕೆ.ಆರ್. ಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಅಪಘಾತ ಸಂಭವಿಸಿದ್ದು, ಕೆಎಎಸ್ ಅಧಿಕಾರಿ ಕೆ.ಎನ್. ಅನುರಾಧಾ ಎಂಬುವರು ಗಾಯಗೊಂಡಿದ್ದಾರೆ.
‘ಕೆಐಎಡಿಬಿಯಲ್ಲಿ ಅಧಿಕಾರಿ ಆಗಿರುವ ಅನುರಾಧಾ ತಮ್ಮ ಖಾಸಗಿ ಕಾರಿನಲ್ಲಿ ಹೊರಟಿದ್ದರು. ಟಿನ್ ಫ್ಯಾಕ್ಟರಿ ಸಮೀಪದ ಮೆಟ್ರೊ ಬ್ಯಾರಿಕೇಡ್ಗೆ ಕಾರು ಗುದ್ದಿತ್ತು. ಕಾರಿನ ಮುಂಭಾಗ ಜಖಂಗೊಂಡಿತ್ತು’ ಎಂದು ಪೊಲೀಸರು ಹೇಳಿದರು.
‘ಅಪಘಾತದ ಬಳಿಕ ಅನುರಾಧಾ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.