ADVERTISEMENT

ಕಸಾಪ: ಜೂನ್‌ನಲ್ಲಿ ಕಲಾವಿದರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಮೇ 2022, 20:14 IST
Last Updated 25 ಮೇ 2022, 20:14 IST

ಬೆಂಗಳೂರು: ‘ಶಿಶುನಾಳ ಶರೀಫರ ತತ್ತ್ವ ಪದಗಳ ಆಧರಿತ ತತ್ತ್ವರಸಾಯನಕಾರ್ಯಕ್ರಮ ಜು.3 ರಂದು ನಡೆಯಲಿದೆ. ಜೂ.18 ಮತ್ತು 19 ರಂದು ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯಲಿದೆ’ ಎಂದುಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

‘ಈ ಕಾರ್ಯಕ್ರಮವನ್ನು ಆಯೋಜಿಸಲು ಪರಿಷತ್ತಿನೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಶಿಶುನಾಳ ಶರೀಫರ ಹಾಗೂ ಕಳಸದ ಗುರು ಗೋವಿಂದ ಭಟ್ಟರ ಪ್ರತಿಷ್ಠಾನ, ಶಾರದ ವಿದ್ಯಾಪೀಠ ಕೈಜೋಡಿಸಿವೆ. ಜೂ.18 ರಂದು ತತ್ತ್ವಪದಗಳ ಗಾಯಕರಿಗೆ, ಜೂ.19 ರಂದು ನೃತ್ಯ ತಂಡದವರಿಗೆ ಬೆಳಿಗ್ಗೆ 9 ಗಂಟೆಯಿಂದ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ’ ಎಂದು ಹೇಳಿದ್ದಾರೆ.

‘ಆಯ್ಕೆ ಪ್ರಕ್ರಿಯೆ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ.ಆಸಕ್ತ ಸಂಗೀತ ಕಲಾವಿದರು, ನೃತ್ಯ ತಂಡದವರು ಅರ್ಜಿಯೊಂದಿಗೆ ಹಾಜರಿರಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.