ADVERTISEMENT

ಶೇ 20 ಕೈಗಾರಿಕೆಗಳು ಬಂದ್‌– ಕಾಸಿಯಾ ಕಳವಳ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 8:25 IST
Last Updated 11 ಜುಲೈ 2020, 8:25 IST
ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರಿಗೆ ಕೆ.ಬಿ.ಅರಸಪ್ಪ ಮನವಿ ಸಲ್ಲಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರಿಗೆ ಕೆ.ಬಿ.ಅರಸಪ್ಪ ಮನವಿ ಸಲ್ಲಿಸಿದರು.   

ಬೆಂಗಳೂರು: ‘ಕೈಗಾರಿಕಾ ಪ್ರದೇಶಗಳಿಗೆ ಸಮರ್ಪಕವಾಗಿ ಸರಕುಗಳು ಪೂರೈಕೆಯಾಗುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಸ್‍ಎಂಇ) ಕಾರ್ಯಾಚರಣೆಯಲ್ಲಿ ಯಾವುದೇ ಅಡೆತಡೆಗಳು ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಕೆ.ಬಿ.ಅರಸಪ್ಪ ಒತ್ತಾಯಿಸಿದರು.

ಕೈಗಾರಿಕಾ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

‘ಲಾಕ್‍ಡೌನ್‍ನಿಂದ ಶೇ 20ರಷ್ಟು ಉದ್ಯಮಗಳು ಶಾಶ್ವತವಾಗಿ ಮುಚ್ಚುವ ಸ್ಥಿತಿ ತಲುಪಿವೆ. ಎರಡನೇ ಲಾಕ್‍ಡೌನ್ ಜಾರಿಯಾದರೆ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಅಸ್ತಿತ್ವ ಏನಾಗಬಹುದು ಎಂದು ಬಹುತೇಕ ಉದ್ದಿಮೆದಾರರು ಕಳವಳ ವ್ಯಕ್ತಪಡಿಸಿದ್ದಾರೆ. ದೀರ್ಘಕಾಲದವರೆಗೆ ಉತ್ಪಾದನೆ ಸ್ಥಗಿತಗೊಳಿಸುವುದರಿಂದ ಕೈಗಾರಿಕೆಗಳು ಬದುಕುಳಿಯಲು ಸಾಧ್ಯವಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.