ADVERTISEMENT

‘ಹಣ ಠೇವಣಿ ಇಟ್ಟು ಕಾಮಗಾರಿ ಮುಂದುವರಿಸಿ’

ನಮ್ಮ ಮೆಟ್ರೊ ಕಾಮಗಾರಿಗೆ ನೈಸ್‌ ಅಡ್ಡಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 20:30 IST
Last Updated 16 ಡಿಸೆಂಬರ್ 2019, 20:30 IST
ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಟ್ರೊ ಕಾಮಗಾರಿ ಕುರಿತು ಸಭೆ ನಡೆಸಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌, ಕಂದಾಯ ಸಚಿವ ಆರ್.ಅಶೋಕ್, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಇದ್ದರು.
ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಟ್ರೊ ಕಾಮಗಾರಿ ಕುರಿತು ಸಭೆ ನಡೆಸಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌, ಕಂದಾಯ ಸಚಿವ ಆರ್.ಅಶೋಕ್, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಇದ್ದರು.   

ಬೆಂಗಳೂರು: ತುಮಕೂರು ರಸ್ತೆಯಲ್ಲಿ ನೈಸ್‌ ಸಂಸ್ಥೆಯಿಂದ ನಮ್ಮ ಮೆಟ್ರೊಗೆ ಜಾಗ ಸಿಗಬೇಕಿದ್ದು, ನೈಸ್‌ಗೆ ಕೊಡಬೇಕಿರುವ ಹಣವನ್ನು ಕೋರ್ಟ್‌ನಲ್ಲಿ ಠೇವಣಿ ಇರಿಸಿ ಕೆಲಸ ಆರಂಭಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚಿಸಿದರು.

ಇಲ್ಲಿನ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸೋಮವಾರ ನಮ್ಮ ಮೆಟ್ರೊ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ನೈಸ್‌ ಸಂಸ್ಥೆಯ ಅಶೋಕ್‌ ಖೇಣಿ ಅವರಿಂದಾಗಿ ಮೆಟ್ರೊ ಕಾಮಗಾರಿಗಳು ವಿಳಂಬವಾಗುವುದು ಬೇಡ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

‘ಹೊಸೂರು ರಸ್ತೆ, ತುಮಕೂರು ರಸ್ತೆಗಳಲ್ಲಿ ಮೆಟ್ರೊ ಕಾಮಗಾರಿಗಳಿಗಾಗಿ 4 ಎಕರೆ ಜಾಗ ಬೇಕು. ಮೂಲ ಮಾಲೀಕರಿಂದ ಕೆಲ ಜಾಗನೈಸ್‌ಗೆಹೋಗಿದೆ. ಅದು ಈಗ ನೈಸ್ ಕಡೆಯಿಂದ ಮೆಟ್ರೊಗೆ ಬರಬೇಕಿದೆ. ಕೆಲವು ಕಡೆ ಸರ್ಕಾರಿ ಜಾಗವನ್ನು ಭೋಗ್ಯಕ್ಕೆ ನೀಡಲಾಗಿದೆ. ಹೀಗಾಗಿ ಕಾಮಗಾರಿ ವಿಳಂಬ ಆಗಿದೆ.ಖೇಣಿ ಅವರು ಇನ್ನೂ ನ್ಯಾಯಾಲಯದಿಂದ ಪ್ರಕರಣ ವಾಪಸ್‌ ಪಡೆದಿಲ್ಲ’ ಎಂದು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇಠ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.