ADVERTISEMENT

‘ಕ್ರೀಡೆಯಿಂದ ಸದೃಢತೆ’

ಖೇಲೋತ್ಸವ –2019 ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 18:28 IST
Last Updated 11 ಫೆಬ್ರುವರಿ 2019, 18:28 IST

ಬೆಂಗಳೂರು: ‘ಕ್ರೀಡಾ ಚಟುವಟಿಕೆಗಳಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ.ಕ್ರೀಡೆಗಳಲ್ಲಿ ತೊಡಗದವರು ಸದೃಢತೆ ಹೊಂದಲು ಸಾಧ್ಯವಿಲ್ಲ’ ಎಂದು ಶಾಸಕ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು.

ನಾರಾಯಣ ಶಿಕ್ಷಣ ಸಂಸ್ಥೆ ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘ಖೇಲೋತ್ಸವ –2019’ ಉದ್ಘಾಟಿಸಿ ಅವರು ಮಾತನಾಡಿದರು.

‘ಖಾಸಗಿ ಸಂಸ್ಥೆಗಳು ಕ್ರೀಡೆಗೆ ಹೆಚ್ಚು ಮಹತ್ವ ನೀಡುತ್ತಿವೆ. ಆದ್ದರಿಂದಕ್ರೀಡಾಪಟುಗಳಿಗೆ ಉತ್ತಮ ಸೌಲಭ್ಯಗಳು ದೊರೆಯುತ್ತಿವೆ. ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

ADVERTISEMENT

‘ನಾರಾಯಣ ಶಿಕ್ಷಣ ಸಂಸ್ಥೆ ಮೊದಲಿನಿಂದಲೂ ಕ್ರೀಡೆಗಳಿಗೆ ಪ್ರಾಮುಖ್ಯ ನೀಡುತ್ತಾ ಬಂದಿದೆ. ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತುಅಂತರರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿದ್ದಾರೆ’ ಎಂದರು.

ಶಾಸಕಿ ಸೌಮ್ಯಾ ರೆಡ್ಡಿ,ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ, ರಾಷ್ಟ್ರೀಯ ಬ್ಯಾಸ್ಕೆಟ್‌ ಬಾಲ್‌ ತಂಡದ ನಾಯಕ ಸಂಜಯ್‌ರಾಜ್‌, ಈಜುಪಟು ಶರತ್ ಗಾಯಕ್ವಾಡ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.