ADVERTISEMENT

ಶೀಲ ಶಂಕಿಸಿ ಮಹಿಳೆಗೆ ಚಾಕು ಇರಿತ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 16:10 IST
Last Updated 14 ಜೂನ್ 2022, 16:10 IST

ಬೆಂಗಳೂರು: ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಮಂಜುಳಾ (48) ಎಂಬುವರನ್ನು ಚಾಕುವಿನಿಂದ ಇರಿದು ಕೊಲ್ಲಲು ಯತ್ನಿಸಲಾಗಿದ್ದು, ಕೃತ್ಯ ಎಸಗಿದ್ದ ಆರೋಪದಡಿ ಪತಿ ರವಿಯನ್ನು (58) ಪೊಲೀಸರು ಬಂಧಿಸಿದ್ದಾರೆ.

‘27 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ, ವಿನಾಯಕ್ ಬಡಾವಣೆಯಲ್ಲಿ ವಾಸವಿದ್ದರು. ಸೋಮವಾರ ಸಂಜೆ 4.30ರ ಸುಮಾರಿಗೆ ಮಂಜುಳಾ ಅವರಿಗೆ ಆರೋಪಿ ಚಾಕುವಿನಿಂದ ಇರಿದಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಂಜುಳಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಮಂಜುಳಾ ಅವರ ಬೆನ್ನು ಹಾಗೂ ಕೈಗೆ ಗಾಯವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಪ್ರಾಣಕ್ಕೆ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.'

ADVERTISEMENT

‘ಆರೋಪಿ ರವಿ ಪತ್ನಿ ಶೀಲದ ಬಗ್ಗೆ ಅನುಮಾನಪಟ್ಟು ಪದೇ ಪದೇ ಜಗಳ ತೆಗೆಯುತ್ತಿದ್ದ. ಸೋಮವಾರವೂ ಜಗಳ ತೆಗೆದು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.