ADVERTISEMENT

ಕೆಂಗೇರಿ ಉಪನಗರದಲ್ಲಿ ಜಲ ಮಂಡಳಿ ವಿಭಾಗ: ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2020, 20:08 IST
Last Updated 9 ಫೆಬ್ರುವರಿ 2020, 20:08 IST
ಯಶವಂತಪುರದ ಎಸ್.ಟಿ.ಸೋಮಶೇಖರ್
ಯಶವಂತಪುರದ ಎಸ್.ಟಿ.ಸೋಮಶೇಖರ್   

ಕೆಂಗೇರಿ: ಕೆಂಗೇರಿ ಉಪನಗರದಲ್ಲಿ ಜಲಮಂಡಳಿಯ ಸೇವಾ ಕೇಂದ್ರದ ಜೊತೆಗೆ ಉಪವಿಭಾಗವನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಕೆಂಗೇರಿ ಉಪನಗರದ ಬ್ರಾಹ್ಮಣ ಸಭಾದ ಗಾಯತ್ರಿ ಮಂದಿರದಲ್ಲಿ ಭಾನುವಾರ ನಡೆದ ಎಸ್ಸೆಸ್ಸೆಲ್ಸಿ ಪುನರ್ಮನನ ತರಗತಿ ಸಮಾರೋಪ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಾಯಿತ್ರಿ ಮಂದಿರದ ಎರಡನೇ ಮಹಡಿಯಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಶಾಸಕರ ಅನುದಾನದಲ್ಲಿ ₹25 ಲಕ್ಷ ಬಿಡು ಗಡೆ ಮಾಡಲಾಗುವುದು ಎಂದರು.

ADVERTISEMENT

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್‌, ‘ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ತೋರಲು ಅಕಾಡೆಮಿ ಮತ್ತು ತಾವು ವೈಯಕ್ತಿಕವಾಗಿ ಸಿದ್ಧ’ ಎಂದರು.

ಸರ್.ಎಂ. ವಿಶ್ವೇಶ್ವರಯ್ಯ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಕೆ. ಎನ್. ವೆಂಕಟನಾರಾಯಣ, ನ್ಯಾಷನಲ್ ಕೋ ಆಪರೇಟಿವ್‌ ಬ್ಯಾಂಕ್ ಅಧ್ಯಕ್ಷ ಎಚ್.ಸಿ. ಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.