ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ಜಿ. ಜಗದೀಶ್ ಅವರನ್ನು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯ ಅಡಿಯಲ್ಲಿರುವ ಕಾಫಿ ಮಂಡಳಿಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಈ ನೇಮಕಾತಿಗೆ ಸಕ್ಷಮ ಪ್ರಾಧಿಕಾರ ಸಹಮತಿ ಸೂಚಿಸಿದ್ದು, ಜಗದೀಶ್ ಅವರನ್ನು ಪ್ರಸಕ್ತ ಹುದ್ದೆಯಿಂದ ಬಿಡುಗಡೆ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸೂಚಿಸಿದೆ.
ಅವರ ನೇಮಕಾತಿ ಅವಧಿಯು, ಅಧಿಕಾರ ಸ್ವೀಕರಿಸಿದ ದಿನದಿಂದ ಐದು ವರ್ಷ ಇರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.