ADVERTISEMENT

ಕೆಎಚ್‌ಬಿಗೆ ಶಾಸಕ ಮಹೇಶ್ ಕುಮಠಳ್ಳಿ ಪಟ್ಟು

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 19:44 IST
Last Updated 10 ಫೆಬ್ರುವರಿ 2020, 19:44 IST
ಮಹೇಶ್‌ ಕುಮಠಳ್ಳಿ
ಮಹೇಶ್‌ ಕುಮಠಳ್ಳಿ   

ಬೆಂಗಳೂರು: ಎಂಎಸ್‌ಐಎಲ್‌ ಅಧ್ಯಕ್ಷ ಸ್ಥಾನ ನಿರಾಕರಿಸಿರುವ ಶಾಸಕ ಮಹೇಶ್ ಕುಮಠಳ್ಳಿ ಜತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರ್ಧರಿಸಿದ್ದಾರೆ.

ತಮ್ಮ ವಿದ್ಯಾರ್ಹತೆಗೆ ತಕ್ಕ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿರುವ ಕುಮಠಳ್ಳಿ, ಕೆಆರ್‌ಡಿಎಲ್‌ ಅಥವಾ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಯಡಿಯೂರಪ್ಪ ಒಂದೆರಡು ದಿನಗಳಲ್ಲಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT