ADVERTISEMENT

ಸುನೀಶ್ ಹೆಗ್ಡೆ ವಿರುದ್ಧ ಅಪಹರಣ ಪ್ರಕರಣ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2020, 20:20 IST
Last Updated 23 ಡಿಸೆಂಬರ್ 2020, 20:20 IST

ಬೆಂಗಳೂರು: ಡ್ರಗ್ಸ್ ಮಾರಾಟ ಜಾಲ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಆರೋಪಿ ಸುನೀಶ್ ಹೆಗ್ಡೆ ವಿರುದ್ಧ ಜಯನಗರ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.

ಇದೇ ಪ್ರಕರಣದಲ್ಲಿ ಬಂಧಿಸಿರುವ ಹ್ಯಾಕರ್ ಶ್ರೀಕಿ ಸ್ನೇಹಿತ ಎನ್ನಲಾದ ಶಶಾಂಕ್‍ನ ಜಯನಗರದ ಮನೆಗೆ ನುಗ್ಗಿದ್ದ ಸುನೀಶ್, ಶಶಾಂಕ್‍ನನ್ನು ಅಪಹರಿಸಿ ಹಲ್ಲೆ ನಡೆಸಿದ್ದ. ಶಶಾಂಕ್‌ ನೀಡಿರುವ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಹಲವಾರು ವೆಬ್‌ಸೈಟ್‌, ಆ್ಯಪ್‌ಗಳನ್ನು ಹ್ಯಾಕ್‌ ಮಾಡುತ್ತಿದ್ದ ಆರೋಪಿ ಶ್ರೀಕಿ, ಹ್ಯಾಕ್‌ ಮಾಡಿಕೊಡುವುದಾಗಿ ಸುನೀಶ್‌ನಿಂದ ₹50 ಲಕ್ಷ ಪಡೆದಿದ್ದ. ಆದರೆ, ಶ್ರೀಕಿ ಕೆಲಸ ಮಾಡಿಕೊಡದೆ ತಲೆಮರಿಸಿಕೊಂಡಿದ್ದ. ಇದರಿಂದ ಕುಪಿತಗೊಂಡು ಆತನ ಸ್ನೇಹಿತನಾಗಿದ್ದ ಶಶಾಂಕ್ ಮೇಲೆ ಹಲ್ಲೆ ಮಾಡಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.