ADVERTISEMENT

ಸಾಹಿತಿ ಕಿರಣ್‌ ನಗರ್‌ಕರ್‌ ನಿಧನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 19:52 IST
Last Updated 5 ಸೆಪ್ಟೆಂಬರ್ 2019, 19:52 IST
   

ಮುಂಬೈ (ಪಿಟಿಐ): ಪ್ರಸಿದ್ಧ ಕಾದಂಬರಿಕಾರ ಮತ್ತು ನಾಟಕಕಾರ ಕಿರಣ್‌ ನಗರ್‌ಕರ್‌ (77) ಗುರುವಾರ ರಾತ್ರಿ ಇಲ್ಲಿ ನಿಧನರಾದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಾಗಿದ್ದ ಅವರು, ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂಗ್ಲಿಷ್‌, ಮರಾಠಿಯಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.