ಬೆಂಗಳೂರು: ಕರ್ನಾಟಕ ರಿಯಲ್ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ಕೆ-ರೇರಾ) ಅಧ್ಯಕ್ಷರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಎಚ್.ಸಿ. ಕಿಶೋರ್ ಚಂದ್ರ ಸೋಮವಾರ ಅಧಿಕಾರ ಸ್ವೀಕರಿಸಿದರು.
ಪ್ರಾಧಿಕಾರದ ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿ ನೀಲಮಣಿ ಎನ್. ರಾಜು ಅವರೂ ಪದಗ್ರಹಣ ಮಾಡಿದರು. ಅಧ್ಯಕ್ಷರಾಗಿದ್ದ ಎಂ.ಆರ್. ಕಾಂಬಳೆ, ಸದಸ್ಯ ಅದೋನಿ ಸೈಯದ್ ಸಲೀಂ ನಿವೃತ್ತಿಯಿಂದ ಈ ಸ್ಥಾನಗಳು ತೆರವಾಗಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.