ಬೆಂಗಳೂರು: ಚೂರಿ ಇರಿತದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರು (22) ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.
ಪ್ರಕರಣ ಸಂಬಂಧ ಜೆಜೆ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಚೂರಿಯಿಂದ ಚುಚ್ಚಿ ಕೊಲೆ: 'ಚಂದ್ರು ದಲಿತ ಸಮುದಾಯಕ್ಕೆ ಸೇರಿದ ಯುವಕ. ಸೋಮವಾರ ತಡರಾತ್ರಿ ಆತನನ್ನು ಅಡ್ಡಗಟ್ಟಿದ್ದ ಗುಂಪೊಂದು ಉರ್ದು ಮಾತಾಡುವಂತೆ ಒತ್ತಾಯಿಸಿತ್ತು. ಆತನಿಗೆ ಉರ್ದು ಬರುತ್ತಿರಲಿಲ್ಲ. ಹೀಗಾಗಿ ಚೂರಿಯಿಂದ ಚುಚ್ಚಿ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:ಬೈಕ್ ತಗುಲಿದ್ದಕ್ಕೆ ಕೊಲೆ: ಮೂವರ ಬಂಧನ
'ಪ್ರಕರಣ ಸಂಬಂಧ ಪೊಲೀಸರು ಕೆಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ' ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.