ADVERTISEMENT

ಕೋದಂಡರಾಮಸ್ವಾಮಿ ರಥೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 19:41 IST
Last Updated 14 ಏಪ್ರಿಲ್ 2019, 19:41 IST
ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಿದ್ದ ಜನಸಮೂಹ
ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಿದ್ದ ಜನಸಮೂಹ   

ಯಲಹಂಕ: ಬಳ್ಳಾರಿ ರಸ್ತೆಯ ಬ್ಯಾಟರಾಯನಪುರದಲ್ಲಿ ಕೋದಂಡರಾಮಸ್ವಾಮಿಯ 71ನೇ ವರ್ಷದ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆಯಿಂದಲೇ ಸ್ವಾಮಿಗೆ ಅಭಿಷೇಕ, ಅರ್ಚನೆ, ಮಹಾನಿವೇದನೆ, ಮಹಾಮಂಗಳಾರತಿಯ ಪೂಜಾಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಕ್ತರ ಜಯಘೋಷಗಳೊಂದಿಗೆ ಮಧ್ಯಾಹ್ನ 1.30ಕ್ಕೆ ರಥವನ್ನು ಎಳೆಯಲಾಯಿತು.ಸುತ್ತಮುತ್ತಲ ಗ್ರಾಮಗಳು, ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು, ಸ್ವಾಮಿಯ ದರ್ಶನ ಪಡೆದರು. ಬಾಳೆಹಣ್ಣು ಮತ್ತು ದವನದ ಸೊಪ್ಪನ್ನು ರಥದ ಮೇಲೆ ಎಸೆಯುವ ಮೂಲಕ ತಮ್ಮ ಹರಕೆ ತೀರಿಸಿದರು.

ದೇವಾಲಯದ ಸುತ್ತಮುತ್ತ ಪಾನಕ, ಮಜ್ಜಿಗೆ ಮತ್ತು ಕೋಸಂಬರಿ ವಿತರಣೆಯ ಜೊತೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.