ADVERTISEMENT

ಮನೆಗೆ ನುಗ್ಗಿ ಸರಗಳವು: ಕೋಳಿ ಮಂಜ ಬಂಧನ

​ಪ್ರಜಾವಾಣಿ ವಾರ್ತೆ
Published 18 ಜುಲೈ 2022, 16:52 IST
Last Updated 18 ಜುಲೈ 2022, 16:52 IST

ಬೆಂಗಳೂರು: ಮನೆಯೊಳಗೆ ನುಗ್ಗಿ ಮಹಿಳೆಯರ ಚಿನ್ನದ ಸರ ಕದ್ದೊಯ್ದಿದ್ದ ಆರೋಪದಡಿ ಮಂಜುನಾಥ್ ಅಲಿಯಾಸ್ ಕೋಳಿ ಮಂಜನನ್ನು (31) ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ಮಂಜ 2017ರಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಜೈಲಿಗೂ ಹೋಗಿ ಜಾಮೀನಿನ ಮೇಲೆ ಹೊರಬಂದು ಹಳೇ ಚಾಳಿ ಮುಂದುವರಿಸಿದ್ದ. ಈತನಿಂದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ತನ್ನದೇ ತಂಡ ಕಟ್ಟಿಕೊಂಡಿದ್ದ ಆರೋಪಿ ಮನೆಗಳನ್ನು ಗುರುತಿಸಿ ಕೃತ್ಯ ಎಸಗುತ್ತಿದ್ದ. ಈತ ಕದ್ದು ತಂದ ಆಭರಣಗಳನ್ನು ತಾಯಿ–ತಂಗಿ ವಿಲೇವಾರಿ ಮಾಡುತ್ತಿದ್ದರು. ಇವರೆಲ್ಲರನ್ನೂ ಈ ಹಿಂದೆ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದರು’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.